ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಪಡು ತೋಟ ನಿವಾಸಿ ಗುರಿಕಾರ ಸಂಜೀವ ಪೂಜಾರಿ ಸಾನದ ಮನೆ ( 81) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ 2 ಪುತ್ರರು ಹಾಗೂ 5ಪುತ್ರಿಯರನ್ನು ಅಗಲಿದ್ದಾರೆ.
ಅವರು ಪಡುಪಣಂಬೂರು ಪಡು ತೋಟದ ಊರಿನ ಗುರಿಕಾರರಾಗಿ, ಪ್ರತಿಷ್ಠಿತ ಸುವರ್ಣ ಮೂಲಸ್ಥಾನದ ಪೂಜಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪಡುಪಣಂಬೂರು ಪರಿಸರದಲ್ಲಿ ಕೊಡುಗೈ ದಾನಿಯಾಗಿ ತಮ್ಮ ಸಾಮಾಜಿಕ ಚಟುವಟಿಕೆಗಳಿಂದ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸದಸ್ಯ ವಿನೋದ್ ಸಾಲ್ಯಾನ್, ಹರಿಪ್ರಸಾದ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ನಿರ್ದೇಶಕ ಶಾಮ್ ಪ್ರಸಾದ್,ಉಪಾಧ್ಯಕ್ಷ ಹೇಮನಾಥ ಅಮೀನ್, ಪಡುಪಣಂಬೂರು ಪಡುತೋಟ ಸುವರ್ಣ ಮೂಲಸ್ಥಾನದ ವಿಜಯಕುಮಾರ್, ಸುಚೇಂದ್ರ ಅಮೀನ್, ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್,ಗೌತಮ್ ಜೈನ್ ಮುಲ್ಕಿ ಅರಮನೆ, ಮುಂಬೈ ಬಂಟರ ಸಂಘದ ಮಾಜೀ ಅಧ್ಯಕ್ಷ ಭುಜಂಗ ಶೆಟ್ಟಿ, ದಿನೇಶ್ ಸುವರ್ಣ ಬೆಳ್ಳಾಯರು ದಾಮೋದರ ಸಾಲ್ಯಾನ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…