ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಮಾವೇಶದ ಪೂರ್ವಭಾವಿ ಸಭೆ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನಡೆಯುವ ಸಾಹಿತ್ಯ ಸಮಾವೇಶದ ಪೂರ್ವಭಾವಿ ಸಭೆಯು ಗಣಪತಿ ವಿದ್ಯಾ ಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಮುಡಿಪು ಇಲ್ಲಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ವಿವಿಧ ಸಾಹಿತ್ಯ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಗೋಷ್ಟಿಗಳೊಂದಿಗೆ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಾಗುವುದು ಎಂದು ಅಭಾಸಾಪ. ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಡಾ.ಸುರೇಶ ನೆಗಳಗುಳಿ ಪ್ರಕಟಿಸಿ ರಾಷ್ಟ್ರೀಯ ಚಿಂತನೆಯ ಕಾರ್ಯಕಮದ ಯಶಸ್ಸಿಗೆ ಸಾಹಿತ್ಯಾಭಿಮಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.


ಅ.ಭಾ.ಸಾ.ಪ.ನಿಕಟಪೂರ್ವ‌ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಕವನ ಕಾವ್ಯ ವಾಚನ,ದೇಶ ಭಕ್ತಿ ಗೀತೆ,ಹಾಡುನೃತ್ಯ,ರಸಪ್ರಶ್ನೆ,ಪೌರಾಣಿಕ ಪಾತ್ರ ನಿರೂಪಣೆ,ವಿದ್ಯಾರ್ಥಿ ಕವಿಗೋಷ್ಟಿಗಳನ್ನು ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಯೋಜಿಸಲಾಗುವುದು ಎಂದು‌ ಸಮಾವೇಶದ ರೂಪುರೇಷೆ ತಿಳಿಸಿದರು.
ಅಭಾಸಾಪ ಉಪಾಧ್ಯಕ್ಷ ಈಶ್ವರ ಪ್ರಸಾದ ಕನ್ಯಾನ,ಕೋಶಾಧಿಕಾರಿ ಪ್ರಶಾಂತ ಕಲ್ಲಡ್ಕ,ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ಉಪಪ್ರಾಂಶು ಪಾಲೆ ರಮಣಿ ಭಂಡಾರಿ,ಕೈರಂಗಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಡಿ.ಲಮಾಣಿ, ಹಿರಿಯ ಶಿಕ್ಷಕ ಚಂದ್ರ ಕುಮಾರ್ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನಿತ್ತರು.ವಿದ್ಯಾಕೇಂದ್ರದ ಪ್ರಾಂಶುಪಾಲ ಶ್ರೀಹರಿ ಮಾರ್ಗದರ್ಶನ ದಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!