ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಸಮಾವೇಶದ ಪೂರ್ವಭಾವಿ ಸಭೆ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನಡೆಯುವ ಸಾಹಿತ್ಯ ಸಮಾವೇಶದ ಪೂರ್ವಭಾವಿ ಸಭೆಯು ಗಣಪತಿ ವಿದ್ಯಾ ಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಮುಡಿಪು ಇಲ್ಲಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ವಿವಿಧ ಸಾಹಿತ್ಯ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಗೋಷ್ಟಿಗಳೊಂದಿಗೆ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಾಗುವುದು ಎಂದು ಅಭಾಸಾಪ. ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಡಾ.ಸುರೇಶ ನೆಗಳಗುಳಿ ಪ್ರಕಟಿಸಿ ರಾಷ್ಟ್ರೀಯ ಚಿಂತನೆಯ ಕಾರ್ಯಕಮದ ಯಶಸ್ಸಿಗೆ ಸಾಹಿತ್ಯಾಭಿಮಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.


ಅ.ಭಾ.ಸಾ.ಪ.ನಿಕಟಪೂರ್ವ‌ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಕವನ ಕಾವ್ಯ ವಾಚನ,ದೇಶ ಭಕ್ತಿ ಗೀತೆ,ಹಾಡುನೃತ್ಯ,ರಸಪ್ರಶ್ನೆ,ಪೌರಾಣಿಕ ಪಾತ್ರ ನಿರೂಪಣೆ,ವಿದ್ಯಾರ್ಥಿ ಕವಿಗೋಷ್ಟಿಗಳನ್ನು ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಯೋಜಿಸಲಾಗುವುದು ಎಂದು‌ ಸಮಾವೇಶದ ರೂಪುರೇಷೆ ತಿಳಿಸಿದರು.
ಅಭಾಸಾಪ ಉಪಾಧ್ಯಕ್ಷ ಈಶ್ವರ ಪ್ರಸಾದ ಕನ್ಯಾನ,ಕೋಶಾಧಿಕಾರಿ ಪ್ರಶಾಂತ ಕಲ್ಲಡ್ಕ,ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ಉಪಪ್ರಾಂಶು ಪಾಲೆ ರಮಣಿ ಭಂಡಾರಿ,ಕೈರಂಗಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಡಿ.ಲಮಾಣಿ, ಹಿರಿಯ ಶಿಕ್ಷಕ ಚಂದ್ರ ಕುಮಾರ್ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನಿತ್ತರು.ವಿದ್ಯಾಕೇಂದ್ರದ ಪ್ರಾಂಶುಪಾಲ ಶ್ರೀಹರಿ ಮಾರ್ಗದರ್ಶನ ದಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!