ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನಡೆಯುವ ಸಾಹಿತ್ಯ ಸಮಾವೇಶದ ಪೂರ್ವಭಾವಿ ಸಭೆಯು ಗಣಪತಿ ವಿದ್ಯಾ ಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಮುಡಿಪು ಇಲ್ಲಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವಿವಿಧ ಸಾಹಿತ್ಯ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಗೋಷ್ಟಿಗಳೊಂದಿಗೆ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಾಗುವುದು ಎಂದು ಅಭಾಸಾಪ. ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಡಾ.ಸುರೇಶ ನೆಗಳಗುಳಿ ಪ್ರಕಟಿಸಿ ರಾಷ್ಟ್ರೀಯ ಚಿಂತನೆಯ ಕಾರ್ಯಕಮದ ಯಶಸ್ಸಿಗೆ ಸಾಹಿತ್ಯಾಭಿಮಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.
ಅ.ಭಾ.ಸಾ.ಪ.ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಕವನ ಕಾವ್ಯ ವಾಚನ,ದೇಶ ಭಕ್ತಿ ಗೀತೆ,ಹಾಡುನೃತ್ಯ,ರಸಪ್ರಶ್ನೆ,ಪೌರಾಣಿಕ ಪಾತ್ರ ನಿರೂಪಣೆ,ವಿದ್ಯಾರ್ಥಿ ಕವಿಗೋಷ್ಟಿಗಳನ್ನು ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಯೋಜಿಸಲಾಗುವುದು ಎಂದು ಸಮಾವೇಶದ ರೂಪುರೇಷೆ ತಿಳಿಸಿದರು.
ಅಭಾಸಾಪ ಉಪಾಧ್ಯಕ್ಷ ಈಶ್ವರ ಪ್ರಸಾದ ಕನ್ಯಾನ,ಕೋಶಾಧಿಕಾರಿ ಪ್ರಶಾಂತ ಕಲ್ಲಡ್ಕ,ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ಉಪಪ್ರಾಂಶು ಪಾಲೆ ರಮಣಿ ಭಂಡಾರಿ,ಕೈರಂಗಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಡಿ.ಲಮಾಣಿ, ಹಿರಿಯ ಶಿಕ್ಷಕ ಚಂದ್ರ ಕುಮಾರ್ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನಿತ್ತರು.ವಿದ್ಯಾಕೇಂದ್ರದ ಪ್ರಾಂಶುಪಾಲ ಶ್ರೀಹರಿ ಮಾರ್ಗದರ್ಶನ ದಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…