ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನಡೆಯುವ ಸಾಹಿತ್ಯ ಸಮಾವೇಶದ ಪೂರ್ವಭಾವಿ ಸಭೆಯು ಗಣಪತಿ ವಿದ್ಯಾ ಕೇಂದ್ರ ಪುಣ್ಯಕೋಟಿ ನಗರ ಕೈರಂಗಳ ಮುಡಿಪು ಇಲ್ಲಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ವಿವಿಧ ಸಾಹಿತ್ಯ ಪ್ರಸ್ತುತಿ ಹಾಗೂ ಸಾಂಸ್ಕೃತಿಕ ಗೋಷ್ಟಿಗಳೊಂದಿಗೆ ಕೈರಂಗಳ ಪುಣ್ಯಕೋಟಿ ನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಾಗುವುದು ಎಂದು ಅಭಾಸಾಪ. ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಡಾ.ಸುರೇಶ ನೆಗಳಗುಳಿ ಪ್ರಕಟಿಸಿ ರಾಷ್ಟ್ರೀಯ ಚಿಂತನೆಯ ಕಾರ್ಯಕಮದ ಯಶಸ್ಸಿಗೆ ಸಾಹಿತ್ಯಾಭಿಮಾನಿಗಳ ಸಹಕಾರ ಅಗತ್ಯವೆಂದು ತಿಳಿಸಿದರು.
ಅ.ಭಾ.ಸಾ.ಪ.ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಕವನ ಕಾವ್ಯ ವಾಚನ,ದೇಶ ಭಕ್ತಿ ಗೀತೆ,ಹಾಡುನೃತ್ಯ,ರಸಪ್ರಶ್ನೆ,ಪೌರಾಣಿಕ ಪಾತ್ರ ನಿರೂಪಣೆ,ವಿದ್ಯಾರ್ಥಿ ಕವಿಗೋಷ್ಟಿಗಳನ್ನು ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗಾಗಿ ಸಂಯೋಜಿಸಲಾಗುವುದು ಎಂದು ಸಮಾವೇಶದ ರೂಪುರೇಷೆ ತಿಳಿಸಿದರು.
ಅಭಾಸಾಪ ಉಪಾಧ್ಯಕ್ಷ ಈಶ್ವರ ಪ್ರಸಾದ ಕನ್ಯಾನ,ಕೋಶಾಧಿಕಾರಿ ಪ್ರಶಾಂತ ಕಲ್ಲಡ್ಕ,ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು ಉಪಪ್ರಾಂಶು ಪಾಲೆ ರಮಣಿ ಭಂಡಾರಿ,ಕೈರಂಗಳ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಡಿ.ಲಮಾಣಿ, ಹಿರಿಯ ಶಿಕ್ಷಕ ಚಂದ್ರ ಕುಮಾರ್ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನಿತ್ತರು.ವಿದ್ಯಾಕೇಂದ್ರದ ಪ್ರಾಂಶುಪಾಲ ಶ್ರೀಹರಿ ಮಾರ್ಗದರ್ಶನ ದಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…