ಉಡುಪಿ: ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ‘ಸಂಜೀವಿನಿ’ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರು (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ(ಎಲ್ಸಿಆರ್ಪಿ) ಗಳು ನ.20ರಂದು ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಗ್ರಾಪಂ ಮಟ್ಟದ ಎಂಬಿಕೆ ಮತ್ತು ಎಲ್ಸಿಆರ್ಪಿ ಮಹಾಒಕ್ಕೂಟದ ಕುಂದಾಪುರ ಘಟಕದ ಅಧ್ಯಕ್ಷೆ ವಸಂತಿ ತಿಳಿಸಿದರು.
ಉಡುಪಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 155 ಗ್ರಾಪಂಗಳ ವ್ಯಾಪ್ತಿಯಲ್ಲಿ 155 ಎಂಬಿಕೆ ಮತ್ತು 465 ಎಲ್ಸಿಆರ್ಪಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಎಂಬಿಕೆಗಳಿಗೆ 5000ರೂ. ಮತ್ತು ಎಲ್ಸಿಆರ್ಪಿಗಳಿಗೆ 2500ರೂ. ಗೌರವಧನ ನೀಡಲಾಗುತ್ತಿದೆ. ಆದರೆ ನಮಗೆ ಈ ವೇತನ ಸಾಕಾಗುವುದಿಲ್ಲ. ಆದ್ದರಿಂದ ಗೌರವ ಧನದ ಬದಲು ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮ ಹುದ್ದೆಯನ್ನು ಖಾಯಂಗೊಳಿಸಿ 3ವರ್ಷದ ನಂತರ ಸರಕಾರವೇ ವೇತನ ಭರಿಸಬೇಕು. ಎಂಬಿಕೆಗಳಿಗೆ 20000ರೂ. ಮತ್ತು ಎಲ್ಸಿಆರ್ಪಿಗಳಿಗೆ 15ಸಾವಿರ ರೂ. ವೇತನವನ್ನು ಪ್ರಯಾಣ ಭತ್ಯೆ ಜೊತೆ ನೀಡಬೇಕು. ಇಎಸ್ಐ ಮತ್ತು ಪಿಎಫ್ ಸೌಲಭ್ಯವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕುಂದಾಪುರ ತಾಲೂಕು ಕಾರ್ಯದರ್ಶಿ ಸುಚಿತ್ರಾ, ಕೋಶಾಧಿಕಾರಿ ಪ್ರಮೀಳಾ, ಹೆಬ್ರಿ ತಾಲೂಕು ಅಧ್ಯಕ್ಷೆ ಪಿ.ಸುಜಾತ, ಉಡುಪಿ ತಾಲೂಕು ಅಧ್ಯಕ್ಷೆ ಸುಜಾತ ಉಪಸ್ಥಿತರಿದ್ದರು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
View Comments
ಒಂದು ಕೂಲಿ ಕೆಲಸಕ್ಕೆ ಹೋದ್ರು ಒಳ್ಳೆ ಕೂಲಿ ಕೊಡ್ತಾರೆ. ಆದ್ರೆ ಇದು ಕೂಲಿ ಕೆಲಸಕ್ಕಿಂತ ಕಡೆ ಆಗಿದೆ. ಈಗ ದಿನಸಿ ವಸ್ತು ಗಳ ದರ ಗಗನಕ್ಕೆ ಏರುತ್ತಿರುವಾಗ ಈ 5 ಸಾವಿರ 2500 ದಲ್ಲಿ ಏನು ಬರ್ತದೆ. ಅವರ ಹೋರಾಟ ಕ್ಕೆ ಶುಭವಾಗಲಿ. ಅವರ ಬೇಡಿಕೆ ಈಡೇರಲಿ.