ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಹಾಗೂ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿ ಕೇಂದ್ರಕ್ಕೆ ಕಾರ್ನಾಡ್ ಲೂಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ಚಾಲನೆ ನೀಡಲಾಯಿತು
ಕಾರ್ಯಕ್ರಮವನ್ನು ಮಂಗಳೂರು ವಲಯದ ಎಂ. ಎಸ್. ಎಂ. ಇ. ಡಿ. ಎಫ್. ಒ. ನ. ಸಹಾಯಕ ನಿರ್ದೇಶಕಿ ಶೃತಿ ಜಿ.ಕೆ. ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಇಂದು ಎಂ .ಮಾತನಾಡಿ ಪ್ಲಾಸ್ಟಿಕ್ ವಸ್ತುಗಳು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕರವಾಗಿದ್ದು ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡುವುದರ ಜೊತೆಗೆ ದೇಶಿಯ ಉತ್ಪನ್ನಗಳಿಗೆ ಬೆಂಬಲ ನೀಡಬೇಕು ಎಂದರು. ಇಂಥ ಕಾರ್ಯಕ್ರಮಗಳಿಂದ ಸ್ವ ಉದ್ಯೋಗದ ಜೊತೆಗೆ ಜನರಲ್ಲಿ ಪ್ಲಾಸ್ಟಿಕ್ ತ್ಯಜಿಸುವ ಜಾಗೃತಿ ಮೂಡಿಸಲು ಸಹಾಯಕಾರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ರಾಜ್ಯ ಸಂಪನ್ಮೂಲ ವ್ಯಕ್ತಿ ಮುಕ್ತ ಶ್ರೀನಿವಾಸ್ ಭಟ್, ಲಯನ್ಸ್ ಕ್ಲಬ್ ನ ಶಾಂಭವಿ ಶೆಟ್ಟಿ, ಸುಧಾಮ ಪೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ.ಪಂ ಸದಸ್ಯ ಸುಭಾಷ್ ಶೆಟ್ಟಿ, ಹರ್ಷ ರಾಜ್ ಶೆಟ್ಟಿ, ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು. ಬಳಿಕಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…