ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಹಾಗೂ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿ ಕೇಂದ್ರಕ್ಕೆ ಕಾರ್ನಾಡ್ ಲೂಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ಚಾಲನೆ ನೀಡಲಾಯಿತು
ಕಾರ್ಯಕ್ರಮವನ್ನು ಮಂಗಳೂರು ವಲಯದ ಎಂ. ಎಸ್. ಎಂ. ಇ. ಡಿ. ಎಫ್. ಒ. ನ. ಸಹಾಯಕ ನಿರ್ದೇಶಕಿ ಶೃತಿ ಜಿ.ಕೆ. ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಇಂದು ಎಂ .ಮಾತನಾಡಿ ಪ್ಲಾಸ್ಟಿಕ್ ವಸ್ತುಗಳು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕರವಾಗಿದ್ದು ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡುವುದರ ಜೊತೆಗೆ ದೇಶಿಯ ಉತ್ಪನ್ನಗಳಿಗೆ ಬೆಂಬಲ ನೀಡಬೇಕು ಎಂದರು. ಇಂಥ ಕಾರ್ಯಕ್ರಮಗಳಿಂದ ಸ್ವ ಉದ್ಯೋಗದ ಜೊತೆಗೆ ಜನರಲ್ಲಿ ಪ್ಲಾಸ್ಟಿಕ್ ತ್ಯಜಿಸುವ ಜಾಗೃತಿ ಮೂಡಿಸಲು ಸಹಾಯಕಾರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ರಾಜ್ಯ ಸಂಪನ್ಮೂಲ ವ್ಯಕ್ತಿ ಮುಕ್ತ ಶ್ರೀನಿವಾಸ್ ಭಟ್, ಲಯನ್ಸ್ ಕ್ಲಬ್ ನ ಶಾಂಭವಿ ಶೆಟ್ಟಿ, ಸುಧಾಮ ಪೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ.ಪಂ ಸದಸ್ಯ ಸುಭಾಷ್ ಶೆಟ್ಟಿ, ಹರ್ಷ ರಾಜ್ ಶೆಟ್ಟಿ, ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು. ಬಳಿಕಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…