ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಹಾಗೂ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿ ಕೇಂದ್ರಕ್ಕೆ ಕಾರ್ನಾಡ್ ಲೂಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ಚಾಲನೆ ನೀಡಲಾಯಿತು
ಕಾರ್ಯಕ್ರಮವನ್ನು ಮಂಗಳೂರು ವಲಯದ ಎಂ. ಎಸ್. ಎಂ. ಇ. ಡಿ. ಎಫ್. ಒ. ನ. ಸಹಾಯಕ ನಿರ್ದೇಶಕಿ ಶೃತಿ ಜಿ.ಕೆ. ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಇಂದು ಎಂ .ಮಾತನಾಡಿ ಪ್ಲಾಸ್ಟಿಕ್ ವಸ್ತುಗಳು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕರವಾಗಿದ್ದು ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡುವುದರ ಜೊತೆಗೆ ದೇಶಿಯ ಉತ್ಪನ್ನಗಳಿಗೆ ಬೆಂಬಲ ನೀಡಬೇಕು ಎಂದರು. ಇಂಥ ಕಾರ್ಯಕ್ರಮಗಳಿಂದ ಸ್ವ ಉದ್ಯೋಗದ ಜೊತೆಗೆ ಜನರಲ್ಲಿ ಪ್ಲಾಸ್ಟಿಕ್ ತ್ಯಜಿಸುವ ಜಾಗೃತಿ ಮೂಡಿಸಲು ಸಹಾಯಕಾರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ರಾಜ್ಯ ಸಂಪನ್ಮೂಲ ವ್ಯಕ್ತಿ ಮುಕ್ತ ಶ್ರೀನಿವಾಸ್ ಭಟ್, ಲಯನ್ಸ್ ಕ್ಲಬ್ ನ ಶಾಂಭವಿ ಶೆಟ್ಟಿ, ಸುಧಾಮ ಪೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ.ಪಂ ಸದಸ್ಯ ಸುಭಾಷ್ ಶೆಟ್ಟಿ, ಹರ್ಷ ರಾಜ್ ಶೆಟ್ಟಿ, ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು. ಬಳಿಕಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…