ಉಡುಪಿ ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಉದಯ ಕುಮಾರ್ ಇರ್ವತ್ತೂರು ಅವರು ಉದ್ಘಾಟಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಆರ್ಥಿಕ ನೀತಿ ಮತ್ತು ಆಧುನಿಕತೆ ಕುರಿತ ನೆಹರೂ ಅವರ ಒಲವು ಅದ್ಭುತ. ಅವರು ದೇಶಕ್ಕೆ ನೀಡಿರುವ ಸೇವೆ ಅಪಾರ. ಆದರೆ ಅವರ ಬಗ್ಗೆ ಇಂದು ವಾಟ್ಸಾಪ್ ಯುನಿವರ್ಸಿಟಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಅಪಕಲ್ಪನೆಗಳನ್ನು ಬಿತ್ತಲಾಗುತ್ತಿದೆ.
ಆದುದರಿಂದ ಇಂದಿನ ಮಕ್ಕಳು ಈ ದೇಶ ನಿರ್ಮಾಣ ಮಾಡಿರುವ ಗಾಂಧಿ, ನೆಹರೂ ಸೇರಿದಂತೆ ಮಹತ್ವದ ವ್ಯಕ್ತಿಗಳ ಕುರಿತು ಓದು ಮತ್ತು ಅಧ್ಯಯನ ಮಾಡಬೇಕು ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಸಂಸ್ಥೆಯ ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್, ಕಾರ್ಯದರ್ಶಿಯಾದ ಪ್ರೊ.ಸುಬ್ರಹ್ಮಣ್ಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…