ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು. 14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಯ ಒಂದು ಕೇಸ್ನಲ್ಲಿ ಜಾಮೀನು ಪಡೆದಿರೋ ಸ್ವಾಮೀಜಿಯನ್ನ ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ. ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.



