ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಈಗಾಗಲೇ ಚಂದ್ರಯಾನ- 3ರಲ್ಲಿ ಯಶಸ್ವಿಯಾಗಿದ್ದು ಇಡೀ ವಿಶ್ವ ಬೆರಗಾಗುವಂತೆ ಮಾಡಿದೆ.
ಚಂದ್ರನ ಅಂಗಳದಲ್ಲಿ ರೋವರ್ ಪ್ರಗ್ಯಾನ್ ಅನ್ನು ಇಳಿಸಿ ಮಹತ್ವದ ಸಾಧನೆ ಮಾಡಿದೆ. ಇಷ್ಟೆಲ್ಲ ಸಾಧನೆ ಮಾಡಿರುವ ಇಸ್ರೋ ಮತ್ತೊಂದು ಪ್ರಮುಖವಾದ ಯೋಜನೆ ಚಂದ್ರಯಾನ- 4ನ್ನು ಅನ್ನು ಉಡಾವಣೆ ಮಾಡುವ ಪ್ಲಾನ್ನಲ್ಲಿದೆ. ಆದ್ರೆ ಈ ಬಾರಿ ಚಂದ್ರನಿಂದ ಕಲ್ಲು, ಮಣ್ಣಿನ ಮಾದರಿಗಳನ್ನ ಭೂಮಿಗೆ ತರಬೇಕು ಎನ್ನುವ ಯೋಚನೆಯಲ್ಲಿದೆ.
ಇಸ್ರೋದ ಸ್ಪೇಸ್ ಅಪ್ಲಿಕೇಶನ್ ಸೆಂಟರ್ನ (SAC/ISRO) ನಿರ್ದೇಶಕ ನಿಲೇಶ್ ದೇಸಾಯಿ ಅವರು ಪುಣೆಯಲ್ಲಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯೊರಾಲಜಿಯ 62ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, ಚಂದ್ರನ ಅಂಗಳದಿಂದ ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಗುರಿಯನ್ನು ಚಂದ್ರಯಾನ- 4 ಯೋಜನೆಯಲ್ಲಿನ ಪ್ರಮುಖ ಅಂಶವಾಗಿದೆ. ಚಂದ್ರಯಾನ-3 ಲ್ಯಾಂಡಿಂಗ್ ಆದಂತೆ ಚಂದ್ರಯಾನ- 4 ಕೂಡ ಲ್ಯಾಂಡ್ ಆಗಲಿದೆ. ಆದ್ರೆ ಕಕ್ಷೆಯ ಮಾಡ್ಯೂಲ್ ಅನ್ನು ಅಲ್ಲಿ ಲ್ಯಾಂಡ್ ಮಾಡಿದ ನಂತರ ಕೇಂದ್ರ ಘಟಕವೊಂದು ವಾಪಸ್ ಭೂಮಿಗೆ ಹಿಂತಿರುಗುತ್ತದೆ. ಅದು ಭೂಮಿಗೆ ಬರಬೇಕಾದರೆ ಮಣ್ಣಿನ ಮಾದರಿಗಳನ್ನು ಹೊತ್ತು ಬರುತ್ತದೆ. ಈ ವೇಳೆ ಅದು ಬರುವಾಗ ಹಂತ ಹಂತವಾಗಿ ಪ್ರತ್ಯೇಕಗೊಳ್ಳುತ್ತದೆ. ಇದು ಮಿಷನ್ನ ಅತ್ಯಂತ ಮಹತ್ವದ ಕಾರ್ಯವಾಗಿರುತ್ತದೆ. ಮುಂದಿನ 5 ರಿಂದ 7 ವರ್ಷಗಳಲ್ಲಿ ಈ ಯೋಜನೆ ಸಿದ್ಧವಾಗಲಿದೆ ಎಂದರು.
ಚಂದ್ರಯಾನ- 3ರಲ್ಲಿ ರೋವರ್ ಪ್ರಗ್ಯಾನ್ ಕೇವಲ 30 ಕೆ.ಜಿ ಮಾತ್ರ ಇತ್ತು. ಆದರೆ ಚಂದ್ರಯಾನ- 4ರಲ್ಲಿ ರೋವರ್ ಬರೋಬ್ಬರಿ 350 ಕೆ.ಜಿ ಇರಲಿದ್ದು ಇದನ್ನು ಚಂದ್ರನ ಮೇಲೆ ಇಳಿಸುವುದೇ ದೊಡ್ಡ ಸವಾಲು ಆಗಲಿದೆ. ಅಲ್ಲದೇ ಚಂದ್ರಯಾನ-3 ಯೋಜನೆ ಯಶಸ್ವಿಯಾದಂತೆ ಚಂದ್ರಯಾನ-4ರ ಯಶಸ್ಸು ಅದು ಭೂಮಿಗೆ ಹಿಂದಿರುಗುವಾಗ ಚಂದ್ರನ ಮೇಲ್ಮೈಯಿಂದ ಮಣ್ಣಿನ ಮಾದರಿಗಳನ್ನು ತರುವ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಇಸ್ರೋ ಹಾಗೂ ಜಪಾನಿನ ಬಾಹ್ಯಾಕಾಶ ಸಂಸ್ಥೆ JAXA ಲುಪೆಕ್ಸ್ ಯೋಜನೆಯಲ್ಲಿ ತೊಡಗಿಕೊಂಡಿವೆ. ಇದು ಕೂಡ ಚಂದ್ರನ ಅನ್ವೇಷಣೆ ಮಾಡುವ ಮಿಷನ್ ಆಗಿರಲಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…