ಕರಾವಳಿ

ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ವಿಟ್ಲ ಶಾಖೆಯ ಸ್ವಂತ ಕಟ್ಟಡದ ಉದ್ಘಾಟನೆ, ಸ್ಥಳಾಂತರ:” ಪರಿಶ್ರಮ, ಸಾಧನೆ ಇದ್ದಾಗ ಗೌರವ ಅರಸಿಕೊಂಡು ಬರುತ್ತದೆ”: ಒಡಿಯೂರು ಶ್ರೀ

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ವಿಟ್ಲ ಶಾಖೆಯ ಸ್ವಂತ ಕಟ್ಟಡದ ಉದ್ಘಾಟನೆ, ಸ್ಥಳಾಂತರ ಕಾರ್ಯಕ್ರಮ ಸ್ಮಾರ್ಟ್ ಸಿಟಿ ಕಟ್ಟಡದ 3 ನೇ ಮಹಡಿಯಲ್ಲಿ ನಡೆಯಿತು.



ಕಟ್ಟಡ ಉದ್ಘಾಟಿಸಿ, ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸಂಘದ ಸಂಸ್ಥಾಪಕರಾದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಹಕಾರಿ ತತ್ವದಲ್ಲಿ ಬದುಕಿನ ಸಾರ ಅಡಗಿದೆ. ಗ್ರಾಹಕರು ಸಹಕಾರಿ ಸಂಘದ ಜೀವಾಳ. ಇದರ ಜತೆಗೆ ಸಿಬ್ಬಂದಿಯ ನಗುಮೊಗದ ಸೇವೆಯೂ ಅಗತ್ಯವಾಗಿದೆ.
ಪರಿಶ್ರಮ, ಸಾಧನೆ ಇದ್ದಾಗ ಗೌರವ ಅರಸಿಕೊಂಡು ಬರುತ್ತದ. ಶ್ರದ್ಧೆ ಯಶಸ್ಸಿನ ಗುಟ್ಟಾದರೆ
ಪ್ರಾಮಾಣಿಕ ಸೇವೆ ಉನ್ನತಿಯ ಮಾರ್ಗ. ಕೊಡುಕೊಳ್ಳುವಿಕೆಯಲ್ಲಿ ಪ್ರಾಮಾಣಿಕತೆಯೊಂದಿಗೆ ನಿಸ್ವಾರ್ಥ ಸೇವೆಯಿದ್ದಾಗ ಯಶಸ್ಸಿಯ ಹಾದಿ ಸುಗಮವಾಗುತ್ತದೆ ಎಂದು ತಿಳಿಸಿದರು .

ಗೌರವ ಮಾರ್ಗದರ್ಶಕರಾದ ಸಾಧ್ವೀ ಮಾತಾನಂದಮಯೀ ಆಶೀರ್ವಚನ ನೀಡಿ ಗುರುವರ್ಯರ ಅನುಗ್ರಹ, ಮಾರ್ಗದರ್ಶನದಲ್ಲಿ ಸಂಘ ಅಗಾಧವಾದ ಬೆಳೆಯುತ್ತಿದೆ. ಸಹಕಾರ ಎಂದರೆ ಮಾನವೀಯ ಮೌಲ್ಯವನ್ನು ತುಂಬಿಕೊಂಡಿದ್ದು, ಸೇವೆಗೆ ವಿಶೇಷ ಮಹತ್ವವಿದೆ.
ಸಹಕಾರಿ ಸಂಸ್ಥೆಗಳಿಂದ ಹಳ್ಳಿಗಳ ಉದ್ಧಾರ ಸಾಧ್ಯ ಎಂದು ತಿಳಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ ಒಡಿಯೂರು ವಿವಿಧೋದ್ದೇಶ ಜಿಲ್ಲೆಯ ಸಹಕಾರಿ ಕ್ಷೇತ್ರ ಮುಂಚೂಣಿಯಲ್ಲಿದೆ. ಭಾರತ ಸರಕಾರ ಸಹಕಾರಿ ಕ್ಷೇತ್ರವನ್ನು ಬೆಳೆಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆಯನ್ನು ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳು ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿದೆ. ಜಿಡಿಪಿ ಶ್ರೇಯಾಂಕ ಮಟ್ಟದಲ್ಲಿ ಭಾರತ 5ನೇ ಸ್ಥಾನವನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಹೋಗಲಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ ವಹಿಸಿದ್ದರು.

ಸಮಾರಂಭದಲ್ಲಿ ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ ಭಟ್, ವೈದ್ಯ ಡಾ. ವಿ. ಕೆ. ಹೆಗ್ಡೆ, ವಕೀಲ ಜಯರಾಮ ರೈ, ಉದ್ಯಮಿಗಳಾದ ಅಲೆಕ್ಸಾಂಡರ್ ಲಸ್ರಾದೊ, ರಾಧಾಕೃಷ್ಣ ನಾಯಕ್ ವಿಟ್ಲ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಫೆಡರೇಶನ್ ಜಿಲ್ಲಾ ಸಂಯೋಜಕ ವಿಜಯ ಕುಮಾರ್ ಬಿ. ಮತ್ತಿತರರು ಭಾಗವಹಿಸಿದ್ದರು.

ವಿಟ್ಲ ಶಾಖೆಯ ಸಿಬ್ಬಂದಿ ಶ್ರದ್ಧಾ ಪ್ರಾರ್ಥಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ಸ್ವಾಗತಿಸಿದರು. ನಿರ್ದೇಶಕ ಎಂ. ಉಗ್ಗಪ್ಪ ಶೆಟ್ಟಿ ಪ್ರಸ್ತಾವನೆಗೈದರು. ನಿರ್ದೇಶಕ ಸೇರಾಜೆ ಗಣಪತಿ ಭಟ್ ವಂದಿಸಿದರು. ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

1 day ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

1 day ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago