ಜನ ಮನದ ನಾಡಿ ಮಿಡಿತ

Advertisement

ಅಡಿಕೆ ಕೃಷಿಯಲ್ಲಿ ತಂತ್ರಜ್ಞಾನ ಮತ್ತು ಸೂಕ್ಷ್ಮಾಣು ಬಳಸಿಕೊಂಡು ಫಸಲು ಹೆಚ್ಚಿಸಲು ವಿಜ್ಞಾನಿಗಳಿಂದ ಮಾಹಿತಿ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಅಡಿಕೆ ಹಿಂಗಾರ ಒಣಗುವ ಮತ್ತು ಎಳೆ ಅಡಿಕೆ ಉದುರುವಿಕೆ ಕುರಿತು ತಂತ್ರಜ್ಞಾನ ಪರಿಶೀಲನೆ ಕಾರ್ಯಕ್ರಮವನ್ನೂ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ಜಗದೀಶ್ ರೈ ರವರ ತೋಟದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರಿನ ಸಸ್ಯಸಂರಕ್ಷಣೆ ವಿಜ್ಞಾನಿಗಳಾದ ಡಾ.ಕೇದಾರನಾಥ ರವರು ಭಾಗವಹಿಸಿ ಅಡಿಕೆ ಬೆಳೆಯಲ್ಲಿ ಕಂಡು ಬರುವ ಹಿಂಗಾರ ಒಣಗುವ ರೋಗದ ಲಕ್ಷಣಗಳು (ಹಿಂಗಾರ ತುದಿ ಭಾಗದಿಂದ ಒಣಗುವುದು ಅಥವಾ ಕಪ್ಪಾಗುವುದು ಹಾಗೂ ಎಳೆ ಕಾಯಿ ಉದುರುವುದು) ಮತ್ತು ಅದರ ನಿರ್ವಹಣೆಯನ್ನು, ತೋಟದಲ್ಲಿರುವ ರೋಗ ಬಾಧಿತ ಹಿಂಗಾರಗಳನ್ನು ತೆಗೆದು ಮಣ್ಣಿನಲ್ಲಿ ಹೂತು ಹಾಕುವುದು. ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳನ್ನು ಬಳಸುವುದು, ಜೈವಿಕ ಸೂಕ್ಷ್ಮಾಣು ಟ್ರೈಕೊಡರ್ಮವನ್ನು ಪ್ರತಿ ಲೀಟರ್ ನೀರಿನಲ್ಲಿ 10 ಗ್ರಾಂ ನಂತೆ ಬೆರಸಿ ಸಿಂಪರಣೆ ಮಾಡುವುದು ಅಥವಾ ಪ್ರೋಪಿಕೊನಾಜೋಲ್ 25% ಇಸಿ ಯನ್ನೂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಮತ್ತು ಹಿಂಗಾರಕ್ಕೆ ಸಿಂಪರಣೆ ಮಾಡುವುದು. ಹಾಗೂ 30 ದಿನಗಳ ನಂತರ ಎರಡನೇ ಸಿಂಪರಣೆಯಾಗಿ ಕಾರ್ಬೆಂಡಜಿಯಮ್ 12%+ಮ್ಯಾಂಕೋಜೆಬ್ 63% ನ್ನು ಪ್ರತಿ ಲೀಟರ್ ನೀರಿನಲ್ಲಿ 2 ಗ್ರಾಂ ಬೆರಸಿ ಹಿಂಗಾರ ಮತ್ತು ಎಳೆಗಳಿಗೆ ಸಿಂಪರಣೆ ಮಾಡುವುದರಿಂದ ಹಿಂಗಾರ ಒಣಗುವ ರೋಗ ಮತ್ತು ಎಲೆ ಚುಕ್ಕೆ ರೋಗಗಳನ್ನು ನಿರ್ವಹಣೆ ಮಾಡಬಹುದು ಎಂದು ಹೇಳಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿಯನ್ನು ನೀಡಿದರು. ಶ್ರೀ ಜಗದೀಶ್ ರೈ ರವರು ವಿಜ್ಞಾನಿಗಳನ್ನು ಹಾಗೂ ಕೃಷಿಕರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 20 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 05 ರೈತರಿಗೆ ಕೃಷಿ ಪರಿಕಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!