ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಹೇಳಿದ್ದಾರೆ.
ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನ್ಯೂ ಡೆಲ್ಲಿಯಿಂದ ‘ಗ್ಲೋಬಲ್ ಅಂಬಾಸೀಡರ್ ಆಫ್ ಎಜ್ಯುಕೇಶನ್ ಎಕ್ಸಲೆನ್ಸ್ ಅವಾಡ್೯’ ಹಾಗೂ ಮೂಡುಬಿದಿರೆಯ ‘ಸಮಾಜ ಮಂದಿರ ಪುರಸ್ಕಾರ-2023’ ಸಹಿತ ವಿವಿಧ ಪುರಸ್ಕಾರಗಳಿಗೆ ಬಾಜನರಾಗಿರುವ ಯುವರಾಜ್ ಜೈನ್ ಅವರು ಕಳೆದ 11 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಬೆಳೆಸಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕವೂ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಅವರು ಮೂಡುಬಿದಿರೆ ಟೆಂಪಲ್ ಟೌನ್ನ ಸ್ಥಾಪಕಾಧ್ಯಕ್ಷರಾಗಿ, ಜೇಸಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿವಿಧ ಸಂಘ ಸಂಸ್ಥೆಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…