ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸಮಾಜ ಬೆಂಗಳೂರು ಆಶ್ರಯದಲ್ಲಿ ನವೆಂಬರ್ 25 ಶನಿವಾರ ಮತ್ತು ನವೆಂಬರ್ 26 ರವಿವಾರ ಬೆಂಗಳೂರಿನ ಶ್ರೀ ಶೃಂಗೇರಿ ಶಂಕರ ಮಠ, ಶಂಕರಪುರ, ಬೆಂಗಳೂರು ಇಲ್ಲಿ ಬೆಂಗಳೂರು ಕರಾಡ ಸಮಾಜ ಆರಂಭವಾಗಿ 25 ವರ್ಷಗಳ ಸವಿನೆನಪಿಗಾಗಿ “ಕರಾಡ ರಜತೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಕರಾಡ ಬ್ರಾಹ್ಮಣ ಸಮಾಜ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಕರಾಡ ರಜತೋತ್ಸವ ಕಾರ್ಯಕ್ರಮದಲ್ಲಿ ಎರಡು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮಗಳ ಜೊತೆ ಸಾಧಕರಿಗೆ ಸನ್ಮಾನವು ನಡೆಯಲಿದ್ದು ಕರಾಡ ಬ್ರಾಹ್ಮಣ ಸಮಾಜದ ಕರ್ನಾಟಕ, ಕೇರಳ,ಮಹಾರಾಷ್ಟ್ರ, ಸೇರಿದಂತೆ ದೇಶದ ವಿವಿಧೆಡೆ ನೆಲೆಸಿರುವ ಸಮಾಜ ಬಾಂಧವರು ಮತ್ತು ಸಂಘಟನೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ದಿನಾಂಕ 25 ರಂದು ತ್ರಿಕಾಲ ಪೂಜೆ ಆರಂಭ, ನಂತರ ಕರಾಡವಾಣಿ ವಿಶೇಶಾಂಕ ಬಿಡುಗಡೆ ಬಳಿಕ ಕರಾಡ ಚಾರಿಟೇಬಲ್ ಟ್ರಸ್ಟ್ ರಿಜಿಸ್ಟರ್ಡ್ ಇದರ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕರಾಡ ರಜತೋತ್ಸವ ಶುಭ ಸಂದರ್ಭದಲ್ಲಿ ಶೃಂಗೇರಿ ಶಂಕರ ಮಠದ ಮುಖ್ಯ ಆಡಳಿತ ಅಧಿಕಾರಿಗಳಾದ ಪದ್ಮಶ್ರೀ ಡಾ. ವಿ. ಆರ್. ಗೌರಿಶಂಕರ್ ಇವರಿಗೆ ವಿಶೇಷ ಗೌರವ ಸನ್ಮಾನ ಏರ್ಪಡಿಸಲಾಗಿದ್ದು, ಸಮಾಜ ಬಾಂಧವರು ಉಪಸ್ಥಿತರಿರುವಂತೆ ಕೋರಲಾಗಿದೆ.
ಸಂಜೆ 5:00 ಗಂಟೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಭಜನ್ ಸಂಧ್ಯಾ ನಡೆಯಲಿದ್ದು ನಂತರ ತ್ರಿಕಾಲ ಪೂಜೆ ಸಮಾರೋಪ ಮತ್ತು ಮಹಾ ಮಂಗಳಾರತಿ ನಡೆಲಿದೆ. ದಿನಾಂಕ 26ರಂದು ಮುಂಜಾನೆ ಗಣ ಹೋಮ ಮತ್ತು ಸತ್ಯನಾರಾಯಣ ಪೂಜೆ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಬ್ರಾಹ್ಮಣ ಸಭಾ ಇದರ ಅಧ್ಯಕ್ಷರಾದ ಶ್ರೀಯುತ ಅಶೋಕ ಹಾರನಹಳ್ಳಿ ಆಗಮಿಸಲಿದ್ದು ಈ ಸಂದರ್ಭದಲ್ಲಿ ಕರಾಡ ಸಮಾಜದ ಅಪ್ರತಿಮ ಸಾಧಕರಾದ ಗಿರಿಧರ ಭಟ್ ಪರಾಡ್ಕರ್ ಮಂಗಳೂರು, ಡಾಕ್ಟರ್ ಪ್ರದೀಪ್ ಆಟಿಕುಕ್ಕೆ, ಕೃಷ್ಣರಾಜ ಶರ್ಮ ಕೊಲ್ಲೆಂಕಾನ ಇವರಿಗೆ ವಿಶೇಷ ಸನ್ಮಾನವಿದೆ, ನಂತರ ಕರಾಡ ರಜತೋತ್ಸವ ಸ್ಮರಣ ಸಂಚಿಕೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನ ಶ್ರೀಯುತ ಅಶೋಕ ಮುಂಡಕಾನ, ಅಧ್ಯಕ್ಷರು ಕನ್ನಡ ಸಮಾಜ ಬೆಂಗಳೂರು ಇವರು ವಹಿಸಿಕೊಳ್ಳಲಿದ್ದು ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರನ್ನು ಕಾರ್ಯಕ್ರಮದ ಉದ್ದಕ್ಕೂ ಉಪಸ್ಥಿತರಿರುವಂತೆ ವಿನಂತಿಸಿದ್ದಾರೆ.
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…