ಚಳಿಗಾಲ ಪ್ರಾರಂಭವಾದ ತಕ್ಷಣ ಕ್ಯಾರೆಟ್ ಕೂಡ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಶಾಖಾಹಾರಿಗಳಿಗೆ ಹೇಳಿ ಮಾಡಿಸಿದ ಆಹಾರವಾಗಿದೆ. ಇದು ವರ್ಷವಿಡಿ ಸುಲಭವಾಗಿ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ ನಂತಹ ಮಿಟಮಿನ್ಗಳಿವೆ. ಪ್ರತಿದಿನ ಕ್ಯಾರೆಟ್ ಅಥವಾ ಅದರ ಜ್ಯೂಸ್ನನ್ನು ಸೇವಿಸುವುದರಿಂದ ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಇದರಿಂದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸಬಹುದಂತೆ. ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಕ್ಯಾರೆಟ್ ಸದಾ ಸಹಕಾರಿ. ಮುದುಕರಿಂದ ಮಕ್ಕಳ ವರೆಗೆ ಅಚ್ಚುಮೆಚ್ಚಿನ ತರಕಾರಿ ಕ್ಯಾರೆಟ್ ಬೆಳೆಯಲು ಸುಲಭ ಮತ್ತು ಆರೋಗ್ಯಕ್ಕೂ ಲಾಭದಾಯಕ. ಮಕ್ಕಳ ಆರೋಗ್ಯಕ್ಕಂತೂ ಕ್ಯಾರೆಟ್ ಬಹಳ ಅಗತ್ಯ.
1. ಕ್ಯಾರೆಟ್ನಲ್ಲಿ ವಿಟಮಿನ್ ಎ ಅಧಿಕವಾಗಿರುವುದರಿಂದ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೃಷ್ಟಿ ಸುಧಾರಿಸುತ್ತದೆ.
2. ಕ್ಯಾರೆಟಿನಲ್ಲಿ ಮಕ್ಕಳ ಬೆಳವಣಿಗೆಗೆ ಅಗತ್ಯ ಪೋಷಕಾಂಶವಾಗಿರುವ ಬೀಟಾ-ಕೆರೋಟಿನ್ ಇದೆ. ಅದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮಾತ್ರವಲ್ಲ ಅದರಲ್ಲಿ ಆ್ಯಂಟಿ ಏಜಿಂಗ್ ಅಂಶಗಳು ಕೂಡ ಇವೆ.
3. ಜೀರ್ಣಕ್ರೀಯೆಯನ್ನು ವೃದ್ಧಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.
ಕ್ಯಾರೆಟ್ನಲ್ಲಿರುವ ಅಧಿಕ ಡಯೆಟರಿ ಫೈಬರ್, ಜೀರ್ಣಕ್ರಿಯೆಯನ್ನು ವೃದ್ಧಿಸುತ್ತದೆ, ಮಲಬದ್ಧತೆ ಹಾಗೂ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.
4. ಕ್ಯಾರೆಟ್ನಲ್ಲಿ ಫೈಬರ್ ಹೇರಳವಾಗಿದ್ದು, ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿದೆ. ಇದು ದೇಹದ ಜೀರ್ಣಕ್ರಿಯೆಯ ಆರೋಗ್ಯವನ್ನು ಕಾಪಾಡುತ್ತದೆ.
5. ಮುಖದ ಮೇಲೆ ಮೊಡವೆಗಳಿದ್ದರೆ, ಆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಕ್ಯಾರೆಟ್ ಜ್ಯೂಸ್ ನಿಮಗೆ ರಾಮಬಾಣವಾಗಿ ಪರಿಣಮಿಸಲಿದೆ. ಮುಖದ ಮೇಲಿನ ಹಳೇ ಮೊಡವೆ ಕಲೆಗಳು ಮಾಯವಾಗಬೇಕಾದರೆ, ಕ್ಯಾರೆಟ್ ಬಳಕೆ ಒಳ್ಳೆಯದು.
6. ಕೆಮ್ಮು ಕಾಣಿಸಿಕೊಂಡರೆ ಕ್ಯಾರೆಟ್ ಜ್ಯೂಸ್ಗೆ ಕರಿಮೆಣಸು ಮತ್ತು ಜೇನು ತುಪ್ಪ ಬೆರೆಸಿ ಕುಡಿದರೆ, ಕೆಲಹೊತ್ತಿನಲ್ಲಿ ಕೆಮ್ಮು ಮಾಯವಾಗಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…