ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತ ಕಡಿತ ಖಂಡನೀಯ; ಸುರೇಶ್ ಕಲ್ಲಾಗರ ಆಕ್ರೋಶ

ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತದಲ್ಲಿ ಕಡಿತಗೊಳಿಸದೆ, ಈ ಹಿಂದೆ ನೀಡಲಾಗುತ್ತಿದ್ದ ಮೊತ್ತವನ್ನೇ ನೀಡಲು ರಾಜ್ಯ ಸರಕಾರ ತಕ್ಷಣವೇ ಕ್ರಮಕೈಕೊಳ್ಳಬೇಕು ಎಂದು ಕಟ್ಟಡ ಕಾರ್ಮಿಕ ಸಂಘಗಳ ಕುಂದಾಪುರ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1ರಿಂದ 4ನೇ ತರಗತಿಯ ಮಕ್ಕಳಿಗೆ ಹಿಂದೆ ಸಿಗುತ್ತಿದ್ದ 5 ಸಾವಿರ ರೂ. ಶೈಕ್ಷಣಿಕ ಧನಸಹಾಯವನ್ನು 1100 ರೂ. ಗೆ ಇಳಿಸಲಾಗಿದೆ. ಪ್ರೌಢಶಾಲೆ, ಪಿಯುಸಿ, ಪದವಿ, ಎಂಜಿನಿಯರಿoಗ್, ಡಿಪ್ಲೊಮಾ ಸಹಿತ ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕಾರ್ಮಿಕರ ಮಕ್ಕಳ ಸ್ಕಾಲರ್‌ಶಿಪ್ ಮೊತ್ತವನ್ನು ಕಡಿತ ಮಾಡಲಾಗಿದೆ. ಬೋಗಸ್ ಕಾರ್ಡ್ ಹೆಚ್ಚಳ ಎಂಬ ಕಾರಣವೊಡ್ಡಿ ಈ ರೀತಿ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಿಡಬ್ಲ್ಯುಎಫ್ ಐ ರಾಜ್ಯಾಧ್ಯಕ್ಷ ಬಾಲಕೃಷ್ಣ, ಸಮಿತಿಯ ಯು. ಶಿವಾನಂದ್, ಚಿಕ್ಕ ಮೊಗವೀರ, ಶಶಿಕಲಾ
ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!