ಇತರೆ

ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತ ಕಡಿತ ಖಂಡನೀಯ; ಸುರೇಶ್ ಕಲ್ಲಾಗರ ಆಕ್ರೋಶ

ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತದಲ್ಲಿ ಕಡಿತಗೊಳಿಸದೆ, ಈ ಹಿಂದೆ ನೀಡಲಾಗುತ್ತಿದ್ದ ಮೊತ್ತವನ್ನೇ ನೀಡಲು ರಾಜ್ಯ ಸರಕಾರ ತಕ್ಷಣವೇ ಕ್ರಮಕೈಕೊಳ್ಳಬೇಕು ಎಂದು ಕಟ್ಟಡ ಕಾರ್ಮಿಕ ಸಂಘಗಳ ಕುಂದಾಪುರ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1ರಿಂದ 4ನೇ ತರಗತಿಯ ಮಕ್ಕಳಿಗೆ ಹಿಂದೆ ಸಿಗುತ್ತಿದ್ದ 5 ಸಾವಿರ ರೂ. ಶೈಕ್ಷಣಿಕ ಧನಸಹಾಯವನ್ನು 1100 ರೂ. ಗೆ ಇಳಿಸಲಾಗಿದೆ. ಪ್ರೌಢಶಾಲೆ, ಪಿಯುಸಿ, ಪದವಿ, ಎಂಜಿನಿಯರಿoಗ್, ಡಿಪ್ಲೊಮಾ ಸಹಿತ ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕಾರ್ಮಿಕರ ಮಕ್ಕಳ ಸ್ಕಾಲರ್‌ಶಿಪ್ ಮೊತ್ತವನ್ನು ಕಡಿತ ಮಾಡಲಾಗಿದೆ. ಬೋಗಸ್ ಕಾರ್ಡ್ ಹೆಚ್ಚಳ ಎಂಬ ಕಾರಣವೊಡ್ಡಿ ಈ ರೀತಿ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಿಡಬ್ಲ್ಯುಎಫ್ ಐ ರಾಜ್ಯಾಧ್ಯಕ್ಷ ಬಾಲಕೃಷ್ಣ, ಸಮಿತಿಯ ಯು. ಶಿವಾನಂದ್, ಚಿಕ್ಕ ಮೊಗವೀರ, ಶಶಿಕಲಾ
ಉಪಸ್ಥಿತರಿದ್ರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

9 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

9 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

10 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago