ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತದಲ್ಲಿ ಕಡಿತಗೊಳಿಸದೆ, ಈ ಹಿಂದೆ ನೀಡಲಾಗುತ್ತಿದ್ದ ಮೊತ್ತವನ್ನೇ ನೀಡಲು ರಾಜ್ಯ ಸರಕಾರ ತಕ್ಷಣವೇ ಕ್ರಮಕೈಕೊಳ್ಳಬೇಕು ಎಂದು ಕಟ್ಟಡ ಕಾರ್ಮಿಕ ಸಂಘಗಳ ಕುಂದಾಪುರ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1ರಿಂದ 4ನೇ ತರಗತಿಯ ಮಕ್ಕಳಿಗೆ ಹಿಂದೆ ಸಿಗುತ್ತಿದ್ದ 5 ಸಾವಿರ ರೂ. ಶೈಕ್ಷಣಿಕ ಧನಸಹಾಯವನ್ನು 1100 ರೂ. ಗೆ ಇಳಿಸಲಾಗಿದೆ. ಪ್ರೌಢಶಾಲೆ, ಪಿಯುಸಿ, ಪದವಿ, ಎಂಜಿನಿಯರಿoಗ್, ಡಿಪ್ಲೊಮಾ ಸಹಿತ ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್ ಮೊತ್ತವನ್ನು ಕಡಿತ ಮಾಡಲಾಗಿದೆ. ಬೋಗಸ್ ಕಾರ್ಡ್ ಹೆಚ್ಚಳ ಎಂಬ ಕಾರಣವೊಡ್ಡಿ ಈ ರೀತಿ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಿಡಬ್ಲ್ಯುಎಫ್ ಐ ರಾಜ್ಯಾಧ್ಯಕ್ಷ ಬಾಲಕೃಷ್ಣ, ಸಮಿತಿಯ ಯು. ಶಿವಾನಂದ್, ಚಿಕ್ಕ ಮೊಗವೀರ, ಶಶಿಕಲಾ
ಉಪಸ್ಥಿತರಿದ್ರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…