ಬಂಟ್ವಾಳ:ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ನನ್ನನ್ನು ಪಕ್ಷಕ್ಕೆ ಎಳೆದುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದವರು ನಳಿನ್ ಕುಮಾರ್ ಎಂದು ಹೇಳಿದ್ದಾರೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಧ್ಯೇಯವಾಗಿದೆ, ಅ ನಿಟ್ಟಿನಲ್ಲಿ ಮುಂದಿನ ಚುನಾವಣೆವರೆಗೆ ನಿರಂತರವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಅಂತ ಹೇಳಿದ್ರು. ಇನ್ನು ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ರವರು ರಾಜ್ಯದಲ್ಲಿ 28 ಸ್ಥಾನವನ್ನು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಲು ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯ ದಿನದವರೆಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತೇನೆ ಎಂದು ಸಂಕಲ್ಪ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಗೌರವಕ್ಕೆ ಚ್ಯುತಿ ಬರದಂತೆ, ಕಾರ್ಯಕರ್ತರ ಭಾವನೆಗಳಿಗೆ ಪೂರಕವಾದ ರೀತಿಯಲ್ಲಿ ರಾಜಕೀಯ ಮಾಡುತ್ತೇನೆ ಅಂತ ಹೇಳಿದ್ದಾರೆ. ಇನ್ನು ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರು, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ಡೊಂಬಯ್ಯ ಅರಳ, ಹರಿಕೃಷ್ಣ ಬಂಟ್ವಾಳ, ರಾಮ್ ದಾಸ ಬಂಟ್ವಾಳ, ಕಸ್ತೂರಿ ಪಂಜ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.



