ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಬಿಜೆಪಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ:ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ನನ್ನನ್ನು ಪಕ್ಷಕ್ಕೆ ಎಳೆದುಕೊಂಡು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದವರು ನಳಿನ್ ಕುಮಾರ್ ಎಂದು ಹೇಳಿದ್ದಾರೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದೇ ನಮ್ಮ ಧ್ಯೇಯವಾಗಿದೆ, ಅ ನಿಟ್ಟಿನಲ್ಲಿ ಮುಂದಿನ ಚುನಾವಣೆವರೆಗೆ ನಿರಂತರವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಅಂತ ಹೇಳಿದ್ರು. ಇನ್ನು ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ರವರು ರಾಜ್ಯದಲ್ಲಿ 28 ಸ್ಥಾನವನ್ನು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಲು ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಲು ಪ್ರಾಮಾಣಿಕವಾಗಿ ದುಡಿಯುತ್ತೇನೆ. ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯ ದಿನದವರೆಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತೇನೆ ಎಂದು ಸಂಕಲ್ಪ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಗೌರವಕ್ಕೆ ಚ್ಯುತಿ ಬರದಂತೆ, ಕಾರ್ಯಕರ್ತರ ಭಾವನೆಗಳಿಗೆ ಪೂರಕವಾದ ರೀತಿಯಲ್ಲಿ ರಾಜಕೀಯ ಮಾಡುತ್ತೇನೆ ಅಂತ ಹೇಳಿದ್ದಾರೆ. ಇನ್ನು ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರು, ಬಂಟ್ವಾಳ ಬಿಜೆಪಿ ಕಾರ್ಯದರ್ಶಿ ಡೊಂಬಯ್ಯ ಅರಳ, ಹರಿಕೃಷ್ಣ ಬಂಟ್ವಾಳ, ರಾಮ್ ದಾಸ ಬಂಟ್ವಾಳ, ಕಸ್ತೂರಿ ಪಂಜ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!