ಮಂಗಳೂರು:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವಾಗುವ ಮೂಲಕ ಸಾಕಷ್ಟು ಪುಣ್ಯ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅಂತೆಯೇ ಈ ಪುಣ್ಯ ಕಾರ್ಯಕ್ಕೆ ಮತ್ತೊಂದು ಸೇರ್ಪಡೆಯಾಗಿದೆ.
ಹೌದು, ಉಡುಪಿ ಜಿಲ್ಲೆಯ ಹಾವಂಜೆ ಕೀಳಿಂಜೆಯ ಛಾಯಾಗ್ರಾಹಕರಾದ ಗಣೇಶ್ ಶೆಟ್ಟಿಯವರ ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಗಾಗಿ ಮತ್ತು ಅವರ ಮಗಳಾದ ಪ್ರತಿಭಾವಂತೆ ಕರಾಟೆ ಪಟು ರಿಯಾಳ ಕ್ರೀಡಾ ಚಟುವಟಿಕೆಗೆ ಆರ್ಥಿಕ ಸಹಾಯ ಒದಗಿಸುವಂತೆ ಮನವಿ ಮಾಡಿದ ಹಿನ್ನೆಲೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಅತ್ಯಂತ ತುರ್ತಾಗಿ ಸ್ಪಂದಿಸಿ, ಮಾನವೀಯ ನೆಲೆಯಲ್ಲಿ ಆರ್ಥಿಕ ಸಹಾಯವನ್ನು ಮಾಡಿದ್ದಾರೆ. ಅಂತೆಯೇ ಮಂಗಳೂರಿನ ಬಲ್ಕುಂಜೆ ನಿವಾಸಿಯಾದ ಗುಲಾಬಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು, ಅವರಿಗೆ ಮನೆ ನಿರ್ಮಾಣಕ್ಕೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗುಲಾಬಿಯವರಿಗೆ ಮನೆಯ ಗೃಹಪ್ರವೇಶದ ಸಂದರ್ಭದಲ್ಲಿ ಹಸ್ತಾಂತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯವನ್ನು ಮಾಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…