ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಫ್ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಪಡೆದುಕೊಂಡಿತು.
ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ.
ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…