ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಕಾಲೇಜಿನಲ್ಲಿ ಜೀವನ ಕೌಶಲ ತರಬೇತಿ: ವಿವೇಕ್ ಆಳ್ವ ಸಂವಹನದ ಜೊತೆ ಕೌಶಲ ಮುಖ್ಯ

ಮೂಡುಬಿದಿರೆ: ಸಂದರ್ಶನದ ಸಂದರ್ಭದಲ್ಲಿ ಸಂವಹನ ಮಾತ್ರವಲ್ಲ, ಜ್ಞಾನದ ಜೊತೆ ಹಾವಭಾವ, ನಡವಳಿಕೆ, ಕೌಶಲಗಳೂ ನಮ್ಮನ್ನು ನಿರೂಪಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.


ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ರಾಜ್ಯ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯಮಶೀಲತಾ ಅಭಿವೃದ್ಧಿ ಘಟಕ ಹಾಗೂ ರೂಬಿಕಾನ್ ಸ್ಕಿಲ್ ಡೆವೆಲಪ್‌ಮೆಂಟ್ ಪ್ರೈ.ಲಿ. ಸಹಯೋಗದಲ್ಲಿ ಆಳ್ವಾಸ್ ಕಾಲೇಜು ಉದ್ಯಮಶೀಲತಾ ಅಭಿವೃದ್ಧಿ ಘಟಕ, ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ನಾಲ್ಕು ದಿನಗಳ ‘ಜೀವನ ಕೌಶಲ ತರಬೇತಿ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.


ನಿಮ್ಮ ಅರ್ಹತೆಯ ಜೊತೆಗೆ ನೀವು ಉದ್ಯೋಗ ನಿರ್ವಹಿಸಲು ಇಚ್ಛಿಸುವ ಉದ್ದೇಶ, ಉತ್ಸಾಹವೂ ಬಹುಮುಖ್ಯ. ನಿಮ್ಮ ಬಯೋಡೆಟಾ (ರೆಸ್ಯೂಮ್) ಕೇವಲ ಪದವಿಗಳನ್ನು ಮಾತ್ರ ಹೊಂದಿರಬಾರದು. ಅದರೊಂದಿಗೆ ನಿಮ್ಮ ಸಾಮರ್ಥ್ಯ, ಸಂವಹನ, ಕೌಶಲಗಳು ಇರಬೇಕು. ಆಗ ನಿಮ್ಮ ಮೌಲ್ಯ ಹೆಚ್ಚುತ್ತದೆ ಎಂದರು.
ನಮ್ಮೊಳಗಿನ ಶಕ್ತಿಯನ್ನು ನಾವು ಮೊದಲು ಅರಿಯಬೇಕು. ಸ್ವಯಂ ಸಾಮರ್ಥ್ಯ ಆಧಾರದಲ್ಲಿ ಮುನ್ನಡೆಯಬೇಕು. ಆಗ ಯಶಸ್ಸು ಸಾಧ್ಯ ಎಂದರು.
ರೂಬಿಕಾನ್ ಸ್ಕಿಲ್ ಡೆವೆಲಪ್‌ಮೆಂಟ್ ಕಂಪೆನಿ ಪ್ರತಿನಿಧಿ, ಕೌಶಲ ತರಬೇತುದಾರ ಜಾಕೀರ್ ಹುಸೈನ್ ಪ್ರೋತ್ಸಾಹಕ ನುಡಿಗಳನ್ನಾಡಿದರು.


‘ನವೆಂಬರ್ 25ರ ವರೆಗೆ ತರಬೇತಿ ನಡೆಯಲಿದ್ದು, ನಾಲ್ಕು ತಂಡಗಳ ಮೂಲಕ ತರಬೇತುದಾರರು ತರಬೇತಿ ನೀಡಲಿದ್ದಾರೆ’ ಎಂದು ಆಳ್ವಾಸ್ ಕಾಲೇಜು ಉದ್ಯಮಶೀಲತಾ ಅಭಿವೃದ್ಧಿ ಘಟಕದ ಸಂಯೋಜಕ ಶಾಜಿಯಾ ಖಾನೂಮ್ ತಿಳಿಸಿದರು. ಝಾಕಿರ್ ಹುಸೇನ್, ಸುಜಾತ ಕುಮಾರಿ, ಅಬ್ದುಲ್ ಇನಾಮ್ದಾರ್, ಮೋನಿದೀಪಾ ದತ್ತಾ ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೌಶಲ ಸಂಯೋಜಕ ರೋಹಿತ್ ಎ.ಆರ್. ಇದ್ದರು. ಪವಿತ್ರಾತೇಜ್ ನಿರೂಪಿಸಿ, ಸಾನಿಧ್ಯಾ ಪ್ರಾರ್ಥಿಸಿ, ಅನ್ಸಿಯಾ ವಂದಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!