ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು.
ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ ಕಾಮಗಾರಿಯು ಕುಂಟುತ್ತಾ ಸಾಗಿ ಅರ್ಧದಲ್ಲಿ ನಿಂತಿದೆ. ಕಾಮಗಾರಿ ವಿಳಂಬ ನೀತಿಯಿಂದಾಗಿ ಸುರತ್ಕಲ್ ಪ್ರದೇಶದ ಜನತೆಗೆ ಸರಿಯಾದ ಮಾರುಕಟ್ಟೆಯಿಲ್ಲದೇ ಸ್ಥಳೀಯರು ಹಾಗೂ ಮಧ್ಯಮ ಮತ್ತು ಬಡ ವರ್ಗದ ವ್ಯಾಪಾರಸ್ಥರು ತೊಂದರೆಗೊಳಗಾಗಿರುತ್ತಾರೆ ಎಂದು ಇನಾಯತ್ ಅಲಿ ತಮ್ಮ ಮನವಿಯಲ್ಲಿ ಸಚಿವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಪೋರೇಟರ್ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಅನಿಲ್ ಕುಮಾರ್, ಮುಖಂಡರಾದ ಭಾಸ್ಕರ್ ಮೊಯಿಲಿ, ಪ್ರತಿಭಾ ಕುಳಾಯಿ, ಗಿರೀಶ್ ಆಳ್ವ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…