ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು.
ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ ಕಾಮಗಾರಿಯು ಕುಂಟುತ್ತಾ ಸಾಗಿ ಅರ್ಧದಲ್ಲಿ ನಿಂತಿದೆ. ಕಾಮಗಾರಿ ವಿಳಂಬ ನೀತಿಯಿಂದಾಗಿ ಸುರತ್ಕಲ್ ಪ್ರದೇಶದ ಜನತೆಗೆ ಸರಿಯಾದ ಮಾರುಕಟ್ಟೆಯಿಲ್ಲದೇ ಸ್ಥಳೀಯರು ಹಾಗೂ ಮಧ್ಯಮ ಮತ್ತು ಬಡ ವರ್ಗದ ವ್ಯಾಪಾರಸ್ಥರು ತೊಂದರೆಗೊಳಗಾಗಿರುತ್ತಾರೆ ಎಂದು ಇನಾಯತ್ ಅಲಿ ತಮ್ಮ ಮನವಿಯಲ್ಲಿ ಸಚಿವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಪೋರೇಟರ್ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಅನಿಲ್ ಕುಮಾರ್, ಮುಖಂಡರಾದ ಭಾಸ್ಕರ್ ಮೊಯಿಲಿ, ಪ್ರತಿಭಾ ಕುಳಾಯಿ, ಗಿರೀಶ್ ಆಳ್ವ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…