ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24ನೇ ಸಾಲಿನ ಮಕ್ಕಳ ಹಕ್ಕು ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಪಡುಪಣಂಬೂರು ಶಾಲಾ ವಿದ್ಯಾರ್ಥಿ ನಾಯಕಿ ಪೂರ್ಣಿಮಾ ವಹಿಸಿದ್ದರು.
ಸಭೆಯಲ್ಲಿ ಮಕ್ಕಳ ಹಕ್ಕುಗಳು ಮಾಸೋತ್ಸವ ಸಮಿತಿಯ ದ.ಕ.ಜಿಲ್ಲಾ ಸಂಚಾಲಕಿ ನಂದ ಪಾಯಸ್ ಮಾತನಾಡಿ ಮಕ್ಕಳ ಮೇಲಿನ ದೌರ್ಜನ್ಯ , ಬಾಲ್ಯ ವಿವಾಹ ಬಾಲ್ಯ ಕಾರ್ಮಿಕತೆ, ತಡೆಗಟ್ಟುವುದೇ ಅಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕು ಎಂದರು.
ಸಿ.ಆರ್. ಪಿ. ಜ್ಯೋತಿ ಮಾತನಾಡಿ ಮಕ್ಕಳು ಮೊಬೈಲ್ ಬದಿಗಿಡಿ ಶಿಕ್ಷಣಕ್ಕೆ ಒತ್ತು ನೀಡಿ ಎಂದರು. ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯರಾದ ವಿನೋದ್ ಸಾಲ್ಯಾನ್,ಅಭಿವೃದ್ದಿ ಅಧಿಕಾರಿ ಸುಧೀರ್, ಕಾರ್ಯದರ್ಶಿ ಸುಜಾತ ಎಸ್, ಅಂಗನವಾಡಿ ಸೂಪರ್ವೈಸರ್ ಸುಲೋಚನ, ಆರೋಗ್ಯ ಇಲಾಖೆಯ ಮಾರ್ಗರೇಟ್ ಸುದರ್ಶಿನಿ ಮತ್ತಿತರರು ಉಪಸ್ಥಿತರಿದ್ದು ಮಕ್ಕಳ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರಿಸಿದರು. ರಾಮಣ್ಣ ಶೆಟ್ಟಿ ಶಾಲೆಯ ಕುಮಾರಿ ಸಾನ್ವಿ ಸ್ವಾಗತಿಸಿದರು, ಕೆರೆಕಾಡು ಶಾಲೆಯ ರಂಜಿತ್ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…