ಪಣೋಲಿಬೈಲು:ಬಂಟ್ವಾಳ ತಾಲೂಕಿನ ಕಾರಣೀಕ ದೈವಸ್ಥಾನವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ಸಂಪನ್ನಗೊoಡಿದೆ.

ಕ್ಷೇತ್ರದಲ್ಲಿ ಬೆಳಿಗ್ಗೆ ಗಣಹೋಮ ಹಾಗೂ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದಿದ್ದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಸಂಪ್ರದಾಯದoತೆ ಭಂಡಾರದ ಮನೆಯಿಂದ ದೈವಗಳ ಭಂಡಾರ ಆಗಮಿಸಿ, ದೈವಗಳಿಗೆ ಕೋಲ ಸೇವೆ ಸಮಾಪನಗೊಂಡಿತು. ಇದರ ಜೊತೆಗೆ ಕ್ಷೇತ್ರದ ಪುಣ್ಯಮಣ್ಣಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆಯಿತು. ಕ್ಷೇತ್ರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಆರ್.ಎಸ್.ಎಸ್. ಪ್ರಮುಖರಾದ ಕಲ್ಲಡ್ಕ ಡಾ| ಪ್ರಭಾಕರ್ ಭಟ್, ಜಿ.ಪಂ.ಮಾಜಿ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ, ಪದ್ಮರಾಜ್ ಸೇರಿದಂತೆ ಅನೇಕ ಗಣ್ಯರು ಬೇಟಿ ನೀಡಿ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನೂ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದೆ.



