ಪುತ್ತೂರು:ವ್ಯಕ್ತಿಯೊಬ್ಬನು ಮಹಿಳೆಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಎಸೆದು ಹೋದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೆನ್ನರಾಯಪಟ್ಟಣ ಮೂಲದ ಮಹಿಳೆಯಾಗಿದ್ದು, ಈಕೆಗೆ ಪುತ್ತೂರು ಬಸ್ ನಿಲ್ದಾಣದ ಹತ್ತಿರ ಮತ್ತು ಬರಿಸುವ ಪಾನೀಯ ನೀಡಿ ಬಳಿಕ ಆರೋಪಿ ಅತ್ಯಾಚಾರ ನಡೆಸಿದ್ದಾರೆ. ತದನಂತರ ಪಾಪಿ ತನ್ನ ಸಹಚರರನ್ನು ಫೋನ್ ಮಾಡಿ ಕರೆಸಿಕೊಳ್ಳುತ್ತಿದ್ದ ವೇಳೆ ಮಹಿಳೆ ಆರೋಪಿಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಮಹಿಳೆ ಮತ್ತಿನ ಪಾನೀಯ ಕುಡಿದ ಪರಿಣಾಮ ಪ್ರಜ್ಞೆ ತಪ್ಪಿ ರಸ್ತೆಯ ಬಳಿ ಬಿದ್ದಿದ್ದು, ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸಂತ್ರಸ್ತೆಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.



