ಉಡುಪಿ:ದೀಪಾವಳಿ ಮುಗಿಯುತ್ತಿದ್ದಂತೆ ದೇವಾಲಯಗಳ ನಗರಿ ಉಡುಪಿಯಲ್ಲೀಗ ದೀಪೋತ್ಸವಗಳ ಸಂಭ್ರಮ.
ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವಗಳನ್ನು ಕಾಣುವುದೇ ಒಂದು ಹಬ್ಬ. ಅದರಲ್ಲೂ ನಸುಕಿನ ಜಾವ ನಡೆಯುವ ವಿಶ್ವರೂಪ ದರ್ಶನ ಒಂದು ಅಪರೂಪದ ಆಚರಣೆ. ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ನಡೆದ ವಿಶ್ವರೂಪ ದರ್ಶನದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ರು. ಮುಂಜಾನೆ ಐದು ಗಂಟೆ ಸುಮಾರಿಗೆ ಸಾವಿರಾರು ಹಣತೆಗಳನ್ನು ಬೆಳಗುವ ಮೂಲಕ ಹಬ್ಬ ಆಚರಿಸಲಾಗಿದ್ದು, ಈ ವೇಳೆ ನಾನಾ ಬಗೆಯ ರಂಗವಲ್ಲಿಗಳು ಗಮನಸೆಳೆದವು. ಓಂ ನಮ ಶಿವಾಯ, ಜೈಶ್ರೀರಾಮ್, ಮಹಾಗಣಪತಿ, ಉಡುಪಿ ಕೃಷ್ಣ, ಮುಂತಾದ ರಂಗವಲ್ಲಿಗಳು ಆಕರ್ಷಕವಾಗಿತ್ತು. ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ನಡೆದಿದ್ದು, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…