ಉಡುಪಿ:ದೀಪಾವಳಿ ಮುಗಿಯುತ್ತಿದ್ದಂತೆ ದೇವಾಲಯಗಳ ನಗರಿ ಉಡುಪಿಯಲ್ಲೀಗ ದೀಪೋತ್ಸವಗಳ ಸಂಭ್ರಮ.
ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವಗಳನ್ನು ಕಾಣುವುದೇ ಒಂದು ಹಬ್ಬ. ಅದರಲ್ಲೂ ನಸುಕಿನ ಜಾವ ನಡೆಯುವ ವಿಶ್ವರೂಪ ದರ್ಶನ ಒಂದು ಅಪರೂಪದ ಆಚರಣೆ. ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ನಡೆದ ವಿಶ್ವರೂಪ ದರ್ಶನದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ರು. ಮುಂಜಾನೆ ಐದು ಗಂಟೆ ಸುಮಾರಿಗೆ ಸಾವಿರಾರು ಹಣತೆಗಳನ್ನು ಬೆಳಗುವ ಮೂಲಕ ಹಬ್ಬ ಆಚರಿಸಲಾಗಿದ್ದು, ಈ ವೇಳೆ ನಾನಾ ಬಗೆಯ ರಂಗವಲ್ಲಿಗಳು ಗಮನಸೆಳೆದವು. ಓಂ ನಮ ಶಿವಾಯ, ಜೈಶ್ರೀರಾಮ್, ಮಹಾಗಣಪತಿ, ಉಡುಪಿ ಕೃಷ್ಣ, ಮುಂತಾದ ರಂಗವಲ್ಲಿಗಳು ಆಕರ್ಷಕವಾಗಿತ್ತು. ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ನಡೆದಿದ್ದು, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…