ಜನ ಮನದ ನಾಡಿ ಮಿಡಿತ

Advertisement

ಸಂಬಳ ಕೇಳಲು ಬಂದ ವ್ಯಕ್ತಿಗೆ ಬೂಟು ನೆಕ್ಕಿಸಿ ವಿಕೃತಿ ಮೆರೆದ ಮಹಿಳಾ ಉದ್ಯಮಿ.!

ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.

ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್‌ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!