ಜನ ಮನದ ನಾಡಿ ಮಿಡಿತ

Advertisement

ಸಂಬಳ ಕೇಳಲು ಬಂದ ವ್ಯಕ್ತಿಗೆ ಬೂಟು ನೆಕ್ಕಿಸಿ ವಿಕೃತಿ ಮೆರೆದ ಮಹಿಳಾ ಉದ್ಯಮಿ.!

ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.

ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್‌ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!