ಜನ ಮನದ ನಾಡಿ ಮಿಡಿತ

Advertisement

ಸಂಬಳ ಕೇಳಲು ಬಂದ ವ್ಯಕ್ತಿಗೆ ಬೂಟು ನೆಕ್ಕಿಸಿ ವಿಕೃತಿ ಮೆರೆದ ಮಹಿಳಾ ಉದ್ಯಮಿ.!

ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.

ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್‌ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!