ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.
ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…