ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.
ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…