ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.
ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…