ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದ್ದು ಇನ್ನು ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…