ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು ಎಂದು ತಿಳಿದು ಬಂದಿದ್ದು ಇನ್ನು ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…