ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ವೃಕ್ಷ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ ಮತ್ತು ಇಂಟರಾಕ್ಟ್ ಕ್ಲಬ್, ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ತೋಕೂರು ಇದರ ಜಂಟಿ ಆಶ್ರಯದಲ್ಲಿ ಮಿಯಾವಾಕೀ ಅರಣ್ಯ ದಟ್ಟ ಕಾಡನ್ನು ನಿರ್ಮಿಸುವ ಕಾರ್ಯಕ್ರಮಕ್ಕೆ ದಿನಾಂಕ 25.11.2023 ರಂದು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ತೋಕೂರು ಇಲ್ಲಿ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ವಹಿಸಿ ಶಾಲೆಯಲ್ಲಿ ಹಸಿರು ಪ್ರಕೃತಿಯನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿರುವ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು,ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೈಕಂಪಾಡಿಯ ವತಿಯಿಂದ ಮಿಯಾವಾಕೀ ಅರಣ್ಯಕ್ಕೆ ಬೇಕಾದ ಗಿಡಗಳನ್ನು ವ್ಯವಸ್ಥೆಗೊಳಿಸಿ ಮಾತನಾಡಿದ ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ ಸಾಲ್ಯಾನ್ ಪರಿಸರ ರಕ್ಷಣೆ ಮತ್ತು ಪ್ರಾಣೆ- ಪಕ್ಷಿಗಳ ಕಾಳಜಿಯನ್ನು ಮಕ್ಕಳಿಗೆ ಕಲಿಸಿಕೊಡುವುದು ನಿಜಕ್ಕೂ ಶ್ಲಾಘನೀಯ ಕೆಲಸ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಾಗಲಿಂಗ ಪುಷ್ಪ ಸಸಿಗಳ ಮೂಲಕ ಅಯೋಧ್ಯೆಯವರೆಗೆ ಹೆಸರನ್ನು ಪಡೆದಿರುವ ವಿನೇಶ್ ಪೂಜಾರಿ ನಿಡ್ಡೋಡಿರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗಲಿಂಗ ಪುಷ್ಪದ ಗಿಡಗಳನ್ನು ಹಸ್ತಾಂತರಿಸಿ ದಟ್ಟ ಅರಣ್ಯ ರಚನೆಯ ಈ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ, ತೋಕೂರಿನ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್, ಶಿಕ್ಷಕರಾದ ಚೇತನ್ ಕೆ. ಉಳ್ಳಾಲ್, ಸುಧಾ ಹೆಗ್ಡೆ, ಜ್ಯೋತಿ ಬಂಜನ್, ವಾಣಿಕುಮಾರಿರವರು ಮತ್ತು ಇಂಟರಾಕ್ಟ್ ಕ್ಲಬ್ಬಿನ ವಿದ್ಯಾರ್ಥಿಗಳು, ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ ಕಾರ್ಯದರ್ಶಿ ಭೋಜ ಕೋಟ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್ ರವರು ಮತ್ತು ಪ್ರಸಾದ್ ಪೂಜಾರಿಯವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಇಂಟರಾಕ್ಟ್ ಕ್ಲಬ್ಬಿನ ಕೋ ಆರ್ಡಿನೇಟರ್ ಶ್ರೀಮತಿ ಉಷಾ ನರೇಂದ್ರ ಕೆರೆಕಾಡುರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…