ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ವೃಕ್ಷ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ ಮತ್ತು ಇಂಟರಾಕ್ಟ್ ಕ್ಲಬ್, ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ತೋಕೂರು ಇದರ ಜಂಟಿ ಆಶ್ರಯದಲ್ಲಿ ಮಿಯಾವಾಕೀ ಅರಣ್ಯ ದಟ್ಟ ಕಾಡನ್ನು ನಿರ್ಮಿಸುವ ಕಾರ್ಯಕ್ರಮಕ್ಕೆ ದಿನಾಂಕ 25.11.2023 ರಂದು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ತೋಕೂರು ಇಲ್ಲಿ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ವಹಿಸಿ ಶಾಲೆಯಲ್ಲಿ ಹಸಿರು ಪ್ರಕೃತಿಯನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿರುವ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು,ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೈಕಂಪಾಡಿಯ ವತಿಯಿಂದ ಮಿಯಾವಾಕೀ ಅರಣ್ಯಕ್ಕೆ ಬೇಕಾದ ಗಿಡಗಳನ್ನು ವ್ಯವಸ್ಥೆಗೊಳಿಸಿ ಮಾತನಾಡಿದ ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ ಸಾಲ್ಯಾನ್ ಪರಿಸರ ರಕ್ಷಣೆ ಮತ್ತು ಪ್ರಾಣೆ- ಪಕ್ಷಿಗಳ ಕಾಳಜಿಯನ್ನು ಮಕ್ಕಳಿಗೆ ಕಲಿಸಿಕೊಡುವುದು ನಿಜಕ್ಕೂ ಶ್ಲಾಘನೀಯ ಕೆಲಸ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಾಗಲಿಂಗ ಪುಷ್ಪ ಸಸಿಗಳ ಮೂಲಕ ಅಯೋಧ್ಯೆಯವರೆಗೆ ಹೆಸರನ್ನು ಪಡೆದಿರುವ ವಿನೇಶ್ ಪೂಜಾರಿ ನಿಡ್ಡೋಡಿರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗಲಿಂಗ ಪುಷ್ಪದ ಗಿಡಗಳನ್ನು ಹಸ್ತಾಂತರಿಸಿ ದಟ್ಟ ಅರಣ್ಯ ರಚನೆಯ ಈ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ, ತೋಕೂರಿನ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್, ಶಿಕ್ಷಕರಾದ ಚೇತನ್ ಕೆ. ಉಳ್ಳಾಲ್, ಸುಧಾ ಹೆಗ್ಡೆ, ಜ್ಯೋತಿ ಬಂಜನ್, ವಾಣಿಕುಮಾರಿರವರು ಮತ್ತು ಇಂಟರಾಕ್ಟ್ ಕ್ಲಬ್ಬಿನ ವಿದ್ಯಾರ್ಥಿಗಳು, ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ ಕಾರ್ಯದರ್ಶಿ ಭೋಜ ಕೋಟ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್ ರವರು ಮತ್ತು ಪ್ರಸಾದ್ ಪೂಜಾರಿಯವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಇಂಟರಾಕ್ಟ್ ಕ್ಲಬ್ಬಿನ ಕೋ ಆರ್ಡಿನೇಟರ್ ಶ್ರೀಮತಿ ಉಷಾ ನರೇಂದ್ರ ಕೆರೆಕಾಡುರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…