ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ವೃಕ್ಷ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ ಮತ್ತು ಇಂಟರಾಕ್ಟ್ ಕ್ಲಬ್, ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ತೋಕೂರು ಇದರ ಜಂಟಿ ಆಶ್ರಯದಲ್ಲಿ ಮಿಯಾವಾಕೀ ಅರಣ್ಯ ದಟ್ಟ ಕಾಡನ್ನು ನಿರ್ಮಿಸುವ ಕಾರ್ಯಕ್ರಮಕ್ಕೆ ದಿನಾಂಕ 25.11.2023 ರಂದು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ತೋಕೂರು ಇಲ್ಲಿ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ವಹಿಸಿ ಶಾಲೆಯಲ್ಲಿ ಹಸಿರು ಪ್ರಕೃತಿಯನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿರುವ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು,ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೈಕಂಪಾಡಿಯ ವತಿಯಿಂದ ಮಿಯಾವಾಕೀ ಅರಣ್ಯಕ್ಕೆ ಬೇಕಾದ ಗಿಡಗಳನ್ನು ವ್ಯವಸ್ಥೆಗೊಳಿಸಿ ಮಾತನಾಡಿದ ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ ಸಾಲ್ಯಾನ್ ಪರಿಸರ ರಕ್ಷಣೆ ಮತ್ತು ಪ್ರಾಣೆ- ಪಕ್ಷಿಗಳ ಕಾಳಜಿಯನ್ನು ಮಕ್ಕಳಿಗೆ ಕಲಿಸಿಕೊಡುವುದು ನಿಜಕ್ಕೂ ಶ್ಲಾಘನೀಯ ಕೆಲಸ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಾಗಲಿಂಗ ಪುಷ್ಪ ಸಸಿಗಳ ಮೂಲಕ ಅಯೋಧ್ಯೆಯವರೆಗೆ ಹೆಸರನ್ನು ಪಡೆದಿರುವ ವಿನೇಶ್ ಪೂಜಾರಿ ನಿಡ್ಡೋಡಿರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗಲಿಂಗ ಪುಷ್ಪದ ಗಿಡಗಳನ್ನು ಹಸ್ತಾಂತರಿಸಿ ದಟ್ಟ ಅರಣ್ಯ ರಚನೆಯ ಈ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ, ತೋಕೂರಿನ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್, ಶಿಕ್ಷಕರಾದ ಚೇತನ್ ಕೆ. ಉಳ್ಳಾಲ್, ಸುಧಾ ಹೆಗ್ಡೆ, ಜ್ಯೋತಿ ಬಂಜನ್, ವಾಣಿಕುಮಾರಿರವರು ಮತ್ತು ಇಂಟರಾಕ್ಟ್ ಕ್ಲಬ್ಬಿನ ವಿದ್ಯಾರ್ಥಿಗಳು, ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ ಕಾರ್ಯದರ್ಶಿ ಭೋಜ ಕೋಟ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್ ರವರು ಮತ್ತು ಪ್ರಸಾದ್ ಪೂಜಾರಿಯವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಇಂಟರಾಕ್ಟ್ ಕ್ಲಬ್ಬಿನ ಕೋ ಆರ್ಡಿನೇಟರ್ ಶ್ರೀಮತಿ ಉಷಾ ನರೇಂದ್ರ ಕೆರೆಕಾಡುರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…