ಜನ ಮನದ ನಾಡಿ ಮಿಡಿತ

Advertisement

ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ; ವೃಕ್ಷದ ಛೇಧಕ್ಕೆ ಮುಹೂರ್ತಪೂಜೆ

ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ನಡೆಸಲಾಯಿತು.

ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದೆ. ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ ನೀಡಲಾಯಿತು. ಇನ್ನು ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಬಾಳಿಗಾ ಮನೆತನದ ಬಿ. ಸುಧೀರ್ ಬಾಳಿಗಾ, ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು, ಸಂಜೀವ ಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್, ಶಿಲ್ಪಿ ಸದಾಶಿವ ಶೆಣೈ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!