ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ನಡೆಸಲಾಯಿತು.
ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದೆ. ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ ನೀಡಲಾಯಿತು. ಇನ್ನು ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಬಾಳಿಗಾ ಮನೆತನದ ಬಿ. ಸುಧೀರ್ ಬಾಳಿಗಾ, ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು, ಸಂಜೀವ ಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್, ಶಿಲ್ಪಿ ಸದಾಶಿವ ಶೆಣೈ, ಮತ್ತಿತರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…