ಬಂಟ್ವಾಳ:ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ರವರ ಮಗಳು ಆಯಿಸತ್ ರಸ್ಮಾ ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ಕಾಣೆಯಾದವರು ಎಂದು ತಿಳಿದು ಬಂದಿದೆ . ದೇರಳಕಟ್ಟೆಯ ಕಾಲೇಜೊಂದರಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಯುವತಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. ನ.23ರ ರಾತ್ರಿ ಮನೆಯವರ ಜೊತೆ ಮಲಗಿದ್ದ ಯುವತಿ ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಕಾಣೆಯಾದ ಯುವಕ ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿ ಕೊಂಡಿದ್ದ. ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಕಾಣೆಯಾಗಿದ್ದಾನೆ. ಇನ್ನು ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೇಮ ಪ್ರಣಯದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…