ಬಂಟ್ವಾಳ:ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ರವರ ಮಗಳು ಆಯಿಸತ್ ರಸ್ಮಾ ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ಕಾಣೆಯಾದವರು ಎಂದು ತಿಳಿದು ಬಂದಿದೆ . ದೇರಳಕಟ್ಟೆಯ ಕಾಲೇಜೊಂದರಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಯುವತಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. ನ.23ರ ರಾತ್ರಿ ಮನೆಯವರ ಜೊತೆ ಮಲಗಿದ್ದ ಯುವತಿ ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇನ್ನು ಕಾಣೆಯಾದ ಯುವಕ ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿ ಕೊಂಡಿದ್ದ. ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಕಾಣೆಯಾಗಿದ್ದಾನೆ. ಇನ್ನು ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೇಮ ಪ್ರಣಯದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…