ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ.
ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ. ಪಂದ್ಯಾಟದ ಲಾಂಛನ ಬಿಡುಗಡೆ ಕಾರ್ಯಕ್ರಮವು ಬಂಟರ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಹಿರಿಯರಾದ ಸಂಜೀವ ಶೆಟ್ಟಿ ಮೊಟ್ಟೆಕುಂಜ ಇವರ ನಿವಾಸದಲ್ಲಿ ನಡೆದಿದ್ದು, ಲಾಂಛನವನ್ನ ಬೆಳ್ಳೂರು ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷರಾದ ಜಯರಾಜ್ ರೈ ಎಡಮುಗೇರು ಗುತ್ತು ಅವರು ಬಿಡುಗಡೆಗೊಳಿಸಿ ಶುಭಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಜತೆಕಾರ್ಯದರ್ಶಿ ಹಾಗೂ ಮಾತೃ ಸಂಘದ ಕಾರ್ಯಕಾರೀ ಸಮಿತಿ ಸದಸ್ಯರಾದ ಕಿರಣ್ ಮಾಡ, ಕಾರಡ್ಕ ಬಂಟರ ಸಂಘದ ಅಧ್ಯಕ್ಷರಾದ ದೇವಾನಂದ ಶೆಟ್ಟಿ , ಕುಂಬಡಾಜೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ರೈ ಗಾಡಿಗುಡ್ಡೆ , ಕುಂಬಳೆ ಫಿರ್ಕಾ ಸಮಿತಿಯ ಕಾರ್ಯದರ್ಶಿಯಾದ ಸುರೇಶ್ ಶೆಟ್ಟಿ ಮೊಟ್ಟೆಕುಂಜ, ಕ್ರಿಕೆಟ್ ಪಂದ್ಯಾಟದ ಸಂಚಾಲಕರಾದ ಸಂತೋಷ್ ರೈ ಪುತ್ರಕಳ, ಸಮಿತಿ ಪ್ರಧಾನ ಕಾರ್ಯದರ್ಶಿಯಾದ ಅಮೃತ್ ರಾಜ್ ರೈ ಮರತ್ತಿಲ, ಸಮಿತಿ ಉಪಾದ್ಯಕ್ಷರಾದ ಹರ್ಷ ರೈ ಬೆಳಿಂಜ, ವಸಂತ ಶೆಟ್ಟಿ, ಪ್ರಜ್ವಲ್ ಉಪಸ್ಥಿತರಿದ್ದರು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…