ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಪೂರ್ವಾಭಾವಿ ಸಭೆ

ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.

ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!