ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಪೂರ್ವಾಭಾವಿ ಸಭೆ

ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.

ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!